9:45 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ

12/04/2024, 15:13

ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು.
ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ – ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಯಿತು.
ರೋಡ್ ಶೋಗೆ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿತು. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು