2:58 PM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು