5:38 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು