8:18 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು