6:09 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು