2:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು