9:55 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್

24/03/2024, 22:19

ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾಕರಿಸಲಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಮಾಜಿ ಸ್ಪೀಕರ್
ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಭಾರೀ ಪೈಪೋಟಿ ನಡೆದಿತ್ತು. ಸುಮಾರು 4 ವರ್ಷಗಳ ಕಾಲ ತೆರೆಮರೆಗೆ ಸರಿದಿದ್ದ ಅನಂತ ಕುಮಾರ್ ಹೆಗಡೆ ಇತ್ತೀಚಿಗಿನ ತಿಂಗಳಲ್ಲಿ ತುಂಬಾ ಕ್ರಿಯಾಶೀಲರಾಗಿದ್ದರು. ತನ್ನ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ಇದೀಗ ಬಿಜೆಪಿ 5ನೇ ಪಟ್ಟಿ ಪ್ರಕಟಿಸುವ ಮೂಲಕ ಅವರಿಗೆ ಟಿಕೆಟ್ ನಿರಾಕರಿಸಿದೆ.
ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ನಾಯಕನಿಗೆ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಬದಲಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ನೀಡಿದ್ದರೂ ಗೆಲ್ಲುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್ ತಕ್ಷಣ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೆ ಶೆಟ್ಟರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಿಢೀರ್ ಆಗಿ ಮತ್ತೆ ಬಿಜೆಪಿ ಸೇರಿದ್ದರು.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು