4:55 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್

24/03/2024, 22:19

ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾಕರಿಸಲಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಮಾಜಿ ಸ್ಪೀಕರ್
ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಭಾರೀ ಪೈಪೋಟಿ ನಡೆದಿತ್ತು. ಸುಮಾರು 4 ವರ್ಷಗಳ ಕಾಲ ತೆರೆಮರೆಗೆ ಸರಿದಿದ್ದ ಅನಂತ ಕುಮಾರ್ ಹೆಗಡೆ ಇತ್ತೀಚಿಗಿನ ತಿಂಗಳಲ್ಲಿ ತುಂಬಾ ಕ್ರಿಯಾಶೀಲರಾಗಿದ್ದರು. ತನ್ನ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ಇದೀಗ ಬಿಜೆಪಿ 5ನೇ ಪಟ್ಟಿ ಪ್ರಕಟಿಸುವ ಮೂಲಕ ಅವರಿಗೆ ಟಿಕೆಟ್ ನಿರಾಕರಿಸಿದೆ.
ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ನಾಯಕನಿಗೆ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಬದಲಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ನೀಡಿದ್ದರೂ ಗೆಲ್ಲುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್ ತಕ್ಷಣ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೆ ಶೆಟ್ಟರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಿಢೀರ್ ಆಗಿ ಮತ್ತೆ ಬಿಜೆಪಿ ಸೇರಿದ್ದರು.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು