7:54 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್

24/03/2024, 22:19

ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾಕರಿಸಲಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಮಾಜಿ ಸ್ಪೀಕರ್
ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಭಾರೀ ಪೈಪೋಟಿ ನಡೆದಿತ್ತು. ಸುಮಾರು 4 ವರ್ಷಗಳ ಕಾಲ ತೆರೆಮರೆಗೆ ಸರಿದಿದ್ದ ಅನಂತ ಕುಮಾರ್ ಹೆಗಡೆ ಇತ್ತೀಚಿಗಿನ ತಿಂಗಳಲ್ಲಿ ತುಂಬಾ ಕ್ರಿಯಾಶೀಲರಾಗಿದ್ದರು. ತನ್ನ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ಇದೀಗ ಬಿಜೆಪಿ 5ನೇ ಪಟ್ಟಿ ಪ್ರಕಟಿಸುವ ಮೂಲಕ ಅವರಿಗೆ ಟಿಕೆಟ್ ನಿರಾಕರಿಸಿದೆ.
ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ನಾಯಕನಿಗೆ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಬದಲಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ನೀಡಿದ್ದರೂ ಗೆಲ್ಲುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್ ತಕ್ಷಣ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೆ ಶೆಟ್ಟರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಿಢೀರ್ ಆಗಿ ಮತ್ತೆ ಬಿಜೆಪಿ ಸೇರಿದ್ದರು.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು