7:51 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಿಜೆಪಿಗೆ ಬಾಗಿಲು ಮೂರಲ್ಲ, ಆರು; ಶ್ರೀರಾಮುಲು ಸೇರ್ಪಡೆ ಹೈಕಮಾಂಡಿಗೆ ಬಿಟ್ಟ ವಿಚಾರ: ಸಚಿವ ತಂಗಡಗಿ ಲೇವಡಿ

24/01/2025, 20:52

ಬೆಂಗಳೂರು(reporterkarnataka.com):
ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು‌ ಬಾಗಿಲಲ್ಲ, ಬದಲಿಗೆ ಆರು ಬಾಗಿಲು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್.ತಂಗಡಗಿ ವ್ಯಂಗ್ಯವಾಡಿದ್ದಾರೆ.
ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.
ಜನಾರ್ದನ್ ರೆಡ್ಡಿ ಅವರು ಸುಳ್ಳಿನ‌ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿತನ ಕಂತೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿನ ವಾಸ್ತವ ಸತ್ಯ ಎಲ್ಲರಿಗೂ ಇದೀಗ ತಿಳಿಯುತ್ತಿದೆ ಎಂದು ತೀಕ್ಷ್ಣ ವಾಗಿ ಹೇಳಿದರು.
ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ವರದಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಯಾವುದೇ ಭಯ ಇಲ್ಲ. ಈ‌ ಹಿಂದೆ ವರದಿಯನ್ನು ಸ್ವೀಕಾರ ಮಾಡಿಲ್ಲ ಎಂದು ಹೇಳುತ್ತಿದ್ದರು. ಇದೀಗ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದ್ದು, ಶೀಘ್ರವೇ ಸಚಿವ‌ ಸಂಪುಟ ಸಭೆಯಲ್ಲಿ ವರದಿಯನ್ನು ತರಲಾಗುವುದು. ಇಲ್ಲಿ ತನಕ‌ ನಾವು ಯಾರು ವರದಿಯನ್ನು ನೋಡಿಲ್ಲ. ಈ ಬಗ್ಗೆ ಅನಗತ್ಯವಾಗಿ ಸುಳ್ಳು ಅಂಕಿ ಅಂಶವನ್ನು ಹೇಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ವರದಿ ಬಗ್ಗೆ ಪರ- ವಿರೋಧ ಇರುವುದು ಸಹಜ. ವರದಿಯನ್ನು ಯಾರು ನೋಡಿಯೇ ಇಲ್ಲ, ಮೊದಲೇ ವಿರೋಧ ಏಕೆ? ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು