5:42 AM Tuesday14 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫುಲ್ ಖುಷಿ

08/02/2025, 22:31

ಹುಬ್ಬಳ್ಳಿ(reporterkarnataka.com): ಹಾದಿ-ಬೀದಿ ರಂಪ ಮಾಡುತ್ತ ನಕಾರಾತ್ಮಕ ರಾಜಕಾರಣ ಮಾಡುತ್ತಿದ್ದವರನ್ನು ದೆಹಲಿ ಮತದಾರರು ಸಂಪೂರ್ಣ ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ದೆಹಲಿ ವಿಧಾನಸಭೆ ಚುನಾವಣೆ ಕುರಿತು ವಿಶ್ಲೇಷಿಸಿದರು.
ಜನವಿರೋಧಿ, ಅಭಿವೃದ್ಧಿ ವಿರೋಧಿ, ಢೋಂಗಿ ಭ್ರಷ್ಟಾಚಾರ ವಿರೋಧಿಗಳಿಗೆ ದೆಹಲಿ ಜನ ಮನೆಯ ಹಾದಿ ತೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ, ಶುದ್ಧ ಆಡಳಿತ ಮತ್ತು ನೈಜ ಪ್ರಜಾಪ್ರಭುತ್ವವನ್ನು ಬೆಂಬಲಿಸಿದ್ದಾರೆ ಎಂದರು.
*ಬಿಜೆಪಿ ಕಂಮ್ ಬ್ಯಾಕ್:* ದೆಹಲಿಯಲ್ಲಿ 27 ವರ್ಷಗಳ ಬಳಿಕ ಐತಿಹಾಸಿಕ, ಅಭೂತಪೂರ್ವ ಗೆಲುವು ಸಾಧಿಸಿ ಪ್ರಚಂಡ ಬಹುಮತದೊಂದಿಗೆ ಆಡಳಿತಕ್ಕೆ ಕಮ್ ಬ್ಯಾಕ್ ಆಗುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು.
ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ ಕೇಜ್ರಿವಾಲ್ ಅವರ ದುರಹಂಕಾರದ ಮನಸ್ಥಿತಿ ಮತ್ತು ರಾಜಕೀಯ ವಿಭಜಕದಲ್ಲಿ ತೊಡಗಿದ್ದವರನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದರು.
ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ಅಧಿಕಾರಕ್ಕೆ ಬಂದ ಕೇಜ್ರಿವಾಲ್ ಕೊನೆಗೆ ತಾವೇ ಹಜಾರೆ ವಿರೋಧಿ ಚಳವಳಿ ಹುಟ್ಟು ಹಾಕಿದರು. ತಾವೇ ಭ್ರಷ್ಟಾಚಾರಿಯಾಗಿ ಜೈಲು ಸೇರಿದರು. ಈಗದರ ಫಲ ಅನುಭವಿಸಿದ್ದಾರೆ ಎಂದು ಜೋಶಿ ಹೇಳಿದರು.
*ನಕಾರಾತ್ಮಕ ರಾಜಕಾರಣಕ್ಕೆ ತಕ್ಕ ಉತ್ತರ:* ದೆಹಲಿಯ ಜನ ಈ ನಕಾರಾತ್ಮಕ ರಾಜಕಾರಣಕ್ಕೆ ಪ್ರತ್ಯುತ್ತರ ಕೊಟ್ಟಿದ್ದಾರೆ. AAP, ಕಾಂಗ್ರೆಸ್ ಗೆ ಸರಿಯಾದ ದಾರಿ ತೋರಿಸಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದವರಿಗೆ, ಅರಾಜಕತೆ ಸೃಷ್ಟಿಸಿದವರಿಗೆ ಬುದ್ಧಿ ಕಲಿಸಿದ್ದಾರೆ ಎಂದು ಹೇಳಿದರು.
*ರಾಹುಲ್ ಸಾರಥ್ಯದಲ್ಲಿ ನಶಿಸಿದ ಕಾಂಗ್ರೆಸ್:* ಕಾಂಗ್ರೆಸ್ ನಶಿಸಿ ಹೋಗಿದೆ. ದೆಹಲಿಯಲ್ಲಿ ಶೂನ್ಯ ಸಂಪಾದನೆ ಮೂಲಕ ರಾಹುಲ್ ಗಾಂಧಿ ನೇತೃತ್ವವನ್ನು ಸಂಪೂರ್ಣ ತಿರಸ್ಕರಿಸಿದೆ. ಜಾರ್ಖಂಡ್, ಮಧ್ಯಪ್ರದೇಶ, ಜಮ್ಮುಕಾಶ್ಮೀರ, ಗುಜರಾತ್, ದೆಹಲಿ ಹೀಗೆ ಎಲ್ಲಿಯೂ ಕಾಂಗ್ರೆಸ್ ಕಾಣಸಿಗದಾಗಿದೆ. ದೇಶದಲ್ಲಿ ಅಷ್ಟೊಂದು ದಯನೀಯ ಸ್ಥಿತಿಗೆ ತಲುಪಿದೆ ಎಂದು ಹೇಳಿದರು.
ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಬಾರದು. ಒಂದೇ ಒಂದು ಸ್ಥಾನವನ್ನೂ ಗೆಲ್ಲಲಾಗದ ಸ್ಥಿತಿ ಒಳ್ಳೆಯದಲ್ಲ. ಕಾಂಗ್ರೆಸ್ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು