4:27 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫುಲ್ ಖುಷಿ

08/02/2025, 22:31

ಹುಬ್ಬಳ್ಳಿ(reporterkarnataka.com): ಹಾದಿ-ಬೀದಿ ರಂಪ ಮಾಡುತ್ತ ನಕಾರಾತ್ಮಕ ರಾಜಕಾರಣ ಮಾಡುತ್ತಿದ್ದವರನ್ನು ದೆಹಲಿ ಮತದಾರರು ಸಂಪೂರ್ಣ ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ದೆಹಲಿ ವಿಧಾನಸಭೆ ಚುನಾವಣೆ ಕುರಿತು ವಿಶ್ಲೇಷಿಸಿದರು.
ಜನವಿರೋಧಿ, ಅಭಿವೃದ್ಧಿ ವಿರೋಧಿ, ಢೋಂಗಿ ಭ್ರಷ್ಟಾಚಾರ ವಿರೋಧಿಗಳಿಗೆ ದೆಹಲಿ ಜನ ಮನೆಯ ಹಾದಿ ತೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ, ಶುದ್ಧ ಆಡಳಿತ ಮತ್ತು ನೈಜ ಪ್ರಜಾಪ್ರಭುತ್ವವನ್ನು ಬೆಂಬಲಿಸಿದ್ದಾರೆ ಎಂದರು.
*ಬಿಜೆಪಿ ಕಂಮ್ ಬ್ಯಾಕ್:* ದೆಹಲಿಯಲ್ಲಿ 27 ವರ್ಷಗಳ ಬಳಿಕ ಐತಿಹಾಸಿಕ, ಅಭೂತಪೂರ್ವ ಗೆಲುವು ಸಾಧಿಸಿ ಪ್ರಚಂಡ ಬಹುಮತದೊಂದಿಗೆ ಆಡಳಿತಕ್ಕೆ ಕಮ್ ಬ್ಯಾಕ್ ಆಗುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು.
ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ ಕೇಜ್ರಿವಾಲ್ ಅವರ ದುರಹಂಕಾರದ ಮನಸ್ಥಿತಿ ಮತ್ತು ರಾಜಕೀಯ ವಿಭಜಕದಲ್ಲಿ ತೊಡಗಿದ್ದವರನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದರು.
ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ಅಧಿಕಾರಕ್ಕೆ ಬಂದ ಕೇಜ್ರಿವಾಲ್ ಕೊನೆಗೆ ತಾವೇ ಹಜಾರೆ ವಿರೋಧಿ ಚಳವಳಿ ಹುಟ್ಟು ಹಾಕಿದರು. ತಾವೇ ಭ್ರಷ್ಟಾಚಾರಿಯಾಗಿ ಜೈಲು ಸೇರಿದರು. ಈಗದರ ಫಲ ಅನುಭವಿಸಿದ್ದಾರೆ ಎಂದು ಜೋಶಿ ಹೇಳಿದರು.
*ನಕಾರಾತ್ಮಕ ರಾಜಕಾರಣಕ್ಕೆ ತಕ್ಕ ಉತ್ತರ:* ದೆಹಲಿಯ ಜನ ಈ ನಕಾರಾತ್ಮಕ ರಾಜಕಾರಣಕ್ಕೆ ಪ್ರತ್ಯುತ್ತರ ಕೊಟ್ಟಿದ್ದಾರೆ. AAP, ಕಾಂಗ್ರೆಸ್ ಗೆ ಸರಿಯಾದ ದಾರಿ ತೋರಿಸಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದವರಿಗೆ, ಅರಾಜಕತೆ ಸೃಷ್ಟಿಸಿದವರಿಗೆ ಬುದ್ಧಿ ಕಲಿಸಿದ್ದಾರೆ ಎಂದು ಹೇಳಿದರು.
*ರಾಹುಲ್ ಸಾರಥ್ಯದಲ್ಲಿ ನಶಿಸಿದ ಕಾಂಗ್ರೆಸ್:* ಕಾಂಗ್ರೆಸ್ ನಶಿಸಿ ಹೋಗಿದೆ. ದೆಹಲಿಯಲ್ಲಿ ಶೂನ್ಯ ಸಂಪಾದನೆ ಮೂಲಕ ರಾಹುಲ್ ಗಾಂಧಿ ನೇತೃತ್ವವನ್ನು ಸಂಪೂರ್ಣ ತಿರಸ್ಕರಿಸಿದೆ. ಜಾರ್ಖಂಡ್, ಮಧ್ಯಪ್ರದೇಶ, ಜಮ್ಮುಕಾಶ್ಮೀರ, ಗುಜರಾತ್, ದೆಹಲಿ ಹೀಗೆ ಎಲ್ಲಿಯೂ ಕಾಂಗ್ರೆಸ್ ಕಾಣಸಿಗದಾಗಿದೆ. ದೇಶದಲ್ಲಿ ಅಷ್ಟೊಂದು ದಯನೀಯ ಸ್ಥಿತಿಗೆ ತಲುಪಿದೆ ಎಂದು ಹೇಳಿದರು.
ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಬಾರದು. ಒಂದೇ ಒಂದು ಸ್ಥಾನವನ್ನೂ ಗೆಲ್ಲಲಾಗದ ಸ್ಥಿತಿ ಒಳ್ಳೆಯದಲ್ಲ. ಕಾಂಗ್ರೆಸ್ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು