10:23 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು