6:20 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು