2:48 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು