6:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು