7:54 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ

22/11/2023, 10:18

ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.‌
ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.
ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಅಂದು ಜಾತ್ಯತೀತ ಅಂತಾ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ನಮಗೆ ಗೊತ್ತಿಲ್ಲ ಎಂದು ಚೆಲುವರಾಯಸ್ವಾಮಿ ನುಡಿದರು.
ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ಹೇಳುತ್ತಿದ್ದಾರೆ. ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್ ಡ್ರೈವ್ ಬಿಡುಗಡೆ ಮಾಡಿ ಅಂತಾ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ ಎಂದು ಸಚಿವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು