7:00 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ

22/11/2023, 10:18

ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.‌
ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.
ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಅಂದು ಜಾತ್ಯತೀತ ಅಂತಾ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ನಮಗೆ ಗೊತ್ತಿಲ್ಲ ಎಂದು ಚೆಲುವರಾಯಸ್ವಾಮಿ ನುಡಿದರು.
ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ಹೇಳುತ್ತಿದ್ದಾರೆ. ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್ ಡ್ರೈವ್ ಬಿಡುಗಡೆ ಮಾಡಿ ಅಂತಾ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ ಎಂದು ಸಚಿವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು