8:45 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು