2:44 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಅರಣ್ಯ ಸಚಿವ ಈಶ್ವರ ಖಂಡ್ರೆ

24/09/2023, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ-ಜೆಡಿಎಸ್ ಇಬ್ಬರ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮ ಜತೆ ಮಾತನಾಡಿ,ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ತಿದ್ದಾರೆ. ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ.ಅವರಿಗೆ ತಮ್ಮ ಅಸ್ತಿತ್ವವೇ ಹೋಗುತ್ತೆ, ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ ಎಂದು ಸಚಿವರು ನುಡಿದರು.ಅವರಿಗೆ ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ.ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಅವರು ನುಡಿದರು.ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ಕಾವೇರಿ ನದಿ ನೀರು ವಿವಾದ ಕುರಿತು ಮಾತನಾಡಿದ ಅವರು, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ.ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು.ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ.ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು