10:06 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್: ಕಾಂಗ್ರೆಸ್ ವಕ್ತಾರರು ಹೇಳಿದ್ದೇನು?

30/06/2023, 21:22

ಕಾರ್ಕಳ(reporterkarnataka.com): ಬಿಜೆಪಿ ಚಟುವಟಿಕೆ ನಡೆಯುವ ಪಕ್ಷದ ಕಚೇರಿ ಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸರಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸರಕಾರವೇ ಶಾಸಕರಿಗಾಗಿ ಕಚೇರಿಯನ್ನು ಒದಗಿಸಿಕೊಡುತ್ತದೆ. ಕಾರ್ಕಳದಲ್ಲಿ ಕೂಡ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕರ ಕಚೇರಿ ಇದೆ. ಅಧಿಕಾರಿಗಳ ಸಭೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಮೊದಲಾದ ಸರಕಾರಿ ಕಾರ್ಯಕ್ರಮಗಳು ಅಲ್ಲಿಯೇ ನಡೆಯಬೇಕು, ವಿನಹ ಪಕ್ಷದ ಚಟುವಟಿಕೆಗಳು ನಡೆಯುವ ಪಕ್ಷದ ಕಚೇರಿಯಲ್ಲಿ ಅಲ್ಲ, ಶಾಸಕ ಸುನೀಲ್ ಕುಮಾರ್ ಇದಕ್ಕೆ ವಿರುದ್ಧವಾಗಿ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಾರೆ. ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳನ್ನು ವಿತರಿಸುತ್ತಾರೆ. ಯಾವುದೇ ಫಲಾನುಭವಿಗಳು ಒಂದು ಪಕ್ಷಕ್ಕೆ ಸೀಮಿತವಲ್ಲ. ಆದ್ದರಿಂದ ಅವರನ್ನು ಪಕ್ಷದ ಕಚೇರಿಗೆ ಬರಲು ಒತ್ತಡ ಹೇರಿದಂತಾಗುತ್ತದೆ. ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಜಿಲ್ಲಾದಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗುವುದು. ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸರಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದನ್ನೇ ದೊಡ್ಡ ಅಪರಾಧ ಎಂಬಂತೆ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ನೋಟೀಸು ಜಾರಿ ಮಾಡಿಸಿದ್ದೀರಿ. ಇದರಿಂದ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ವೈದ್ಯರಿಗೆ ನೋಟೀಸು ನೀಡುವಲ್ಲಿ ವಹಿಸಿದ ಆಸಕ್ತಿ ವೈದ್ಯರ ಮತ್ತು ಸಿಬ್ಬಂದಿಗಳ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ತೋರಿಸುತ್ತಿದ್ದರೆ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುತ್ತಿತ್ತು. ಅದು ನಿಮ್ಮಿಂದ ಯಾಕೆ ಸಾದ್ಯವಾಗಲಿಲ್ಲ ? ಅಧಿಕಾರವಿದೆ ಎನ್ನುವ ಮಾತ್ರಕ್ಕೆ ನ್ಯಾಯದಲ್ಲಿ ವ್ಯತ್ಯಾಸವಿದೆಯೇ? ಇಲ್ಲಿ ತಮಗೊಂದು ಕಾನೂನು ವೈದ್ಯರಿಗೊಂದು ಕಾನೂನೇ ? ಎಂದು ಶಾಸಕರನ್ನು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು