11:56 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರಿಂದ ದಾಂಧಲೆ: ತಾಲೂಕು ಪಂಚಾಯಿತಿ ಇಒ ಮೇಲೆ ಹಲ್ಲೆ; ಗೂಂಡಾಗಿರಿ ವಿರುದ್ಧ ಪ್ರತಿಭಟನೆ

15/02/2022, 07:42

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ತಾಲೂಕು ಪಂಚಾಯಿತಿ ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಒ ಮಡುಗಿನ ಬಸಪ್ಪ ಕರ್ತವ್ಯ ನಿರ್ವಹಿಸುವ ವೇಳೆ ನೂತನವಾಗಿ ಆಯ್ಕೆಯಾದ ಕೆಡಿಪಿ ಸದಸ್ಯರು ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರು ಬೆಂಬಲಿಗರ ಜತೆ ಬಂದು ಶಾಸಕರು ನಡೆಸಿ ಸಭೆಗೆ ಕೆಡಿಪಿ ಸದಸ್ಯರನ್ನು ಆಹ್ವಾನಿಸಿಲ್ಲ ಎಂದು ನಿಂದಿಸಿ ಹಲ್ಲೆ ನಡೆಸಿದರು. ಕಚೇರಿಯ ಪೀಠೋಪಕರಣಗಳನ್ನು ಕೂಡ ಧ್ವಂಸ ಮಾಡಿದ್ದಾರೆ.


ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಭಾಗದ ಗ್ರಾಪಂ ಕಚೇರಿಗಳಲ್ಲಿ ಇ-ಸ್ವತ್ತು ಖಾತೆಗೆ 50 ರೂ. ಇದ್ದು 5 ರಿಂದ 10 ಸಾವಿರು ರೂ.ಗಳನ್ನು ಪಡೆಯುತ್ತಿದ್ದಾರೆ ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಸರಿಯಾದ ಉತ್ತರ ನೀಡದ ಭ್ರಷ್ಟ ಅಧಿಕಾರಿಗಳು ತೊಲಗಲಿ ಎಂದು ತಾಪಂ  ಇ ಒ ಕಾಚೇರಿ ಮುಂದೆ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಾಪಂ ಇಒ ಮಡುಗಿನ ಬಸಪ್ಪ ಮಾತನಾಡಿ, ಯಾವುದೇ ಕೆಪಿಡಿ ಸಭೆ ನಡೆದಿಲ್ಲ. ಆದರೂ ಸಹ ಕೆಡಿಪಿ ಸದಸ್ಯರು ಹಾಗೂ ಬಿಜೆಪಿ ಬೆಂಬಲಿಗರು ಕರ್ತವ್ಯಕ್ಕೆ ಅಡ್ಡಿಪಡಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಡಿವೈಎಸ್‍ಪಿ ಕೆ.ಶ್ರೀಧರ್, ವೃತ್ತ ನಿರೀಕ್ಷ ಜೆ.ಎಸ್.ತಿಪ್ಪೇಸ್ವಾಮಿ, ಪಿಎಸ್‍ಐ ಮಹೇಶ್‍ಗೌಡ ಹಾಗೂ ಸಿಬ್ಬಂದಿಗಳು ಬಂದು ತಾಪಂ ಇಒ ಮಡುಗಿನ ಬಸಪ್ಪ ಮೇಲೆ ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ತಾಪಂ ಕಚೇರಿ ಮುಂದೆ ಗ್ರಾಪಂ ಪಿಡಿಒಗಳು ಕಚೇರಿ un ತಾಪಂ ಇಒ ಮೇಲೆ ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ವಾಲ್ಮೀಕಿ ವೃತ್ತದಲ್ಲಿ ಗ್ರಾಪಂ ಸದಸ್ಯರ, ನಗರಸಭೆ ಸದಸ್ಯರು ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಸ್ತೆಗಿಗಿದು ಪ್ರತಿಭಟನೆ ನಡೆಸಿದ್ದಾರೆ.


ನಗರಸಭೆ ಸದಸ್ಯ ವೀರಭದ್ರಪ್ಪ ಮಾತನಾಡಿ ತಾಲೂಕಿನ ಇವಿಧ ಇಲಾಖೆಗಳಲ್ಲಿ ಹಾಗೂ ಪಿಡಿಒಗಳು ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸುವಂತಿಲ್ಲ. ಪದೆಪದೇ ವರ್ಗಾವಣೆ, ಅಧಿಕಾರಿಗಳ ಮೇಲೆ ಗೂಂಡ ವರ್ತನೆ ಮಾಡುವ  ಬಿಜೆಪಿ ಕಾರ್ಯಕರ್ತರ ವಿರುದ್ದ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು