6:40 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರಿಂದ ದಾಂಧಲೆ: ತಾಲೂಕು ಪಂಚಾಯಿತಿ ಇಒ ಮೇಲೆ ಹಲ್ಲೆ; ಗೂಂಡಾಗಿರಿ ವಿರುದ್ಧ ಪ್ರತಿಭಟನೆ

15/02/2022, 07:42

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ತಾಲೂಕು ಪಂಚಾಯಿತಿ ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಒ ಮಡುಗಿನ ಬಸಪ್ಪ ಕರ್ತವ್ಯ ನಿರ್ವಹಿಸುವ ವೇಳೆ ನೂತನವಾಗಿ ಆಯ್ಕೆಯಾದ ಕೆಡಿಪಿ ಸದಸ್ಯರು ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರು ಬೆಂಬಲಿಗರ ಜತೆ ಬಂದು ಶಾಸಕರು ನಡೆಸಿ ಸಭೆಗೆ ಕೆಡಿಪಿ ಸದಸ್ಯರನ್ನು ಆಹ್ವಾನಿಸಿಲ್ಲ ಎಂದು ನಿಂದಿಸಿ ಹಲ್ಲೆ ನಡೆಸಿದರು. ಕಚೇರಿಯ ಪೀಠೋಪಕರಣಗಳನ್ನು ಕೂಡ ಧ್ವಂಸ ಮಾಡಿದ್ದಾರೆ.


ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಭಾಗದ ಗ್ರಾಪಂ ಕಚೇರಿಗಳಲ್ಲಿ ಇ-ಸ್ವತ್ತು ಖಾತೆಗೆ 50 ರೂ. ಇದ್ದು 5 ರಿಂದ 10 ಸಾವಿರು ರೂ.ಗಳನ್ನು ಪಡೆಯುತ್ತಿದ್ದಾರೆ ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಸರಿಯಾದ ಉತ್ತರ ನೀಡದ ಭ್ರಷ್ಟ ಅಧಿಕಾರಿಗಳು ತೊಲಗಲಿ ಎಂದು ತಾಪಂ  ಇ ಒ ಕಾಚೇರಿ ಮುಂದೆ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಾಪಂ ಇಒ ಮಡುಗಿನ ಬಸಪ್ಪ ಮಾತನಾಡಿ, ಯಾವುದೇ ಕೆಪಿಡಿ ಸಭೆ ನಡೆದಿಲ್ಲ. ಆದರೂ ಸಹ ಕೆಡಿಪಿ ಸದಸ್ಯರು ಹಾಗೂ ಬಿಜೆಪಿ ಬೆಂಬಲಿಗರು ಕರ್ತವ್ಯಕ್ಕೆ ಅಡ್ಡಿಪಡಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಡಿವೈಎಸ್‍ಪಿ ಕೆ.ಶ್ರೀಧರ್, ವೃತ್ತ ನಿರೀಕ್ಷ ಜೆ.ಎಸ್.ತಿಪ್ಪೇಸ್ವಾಮಿ, ಪಿಎಸ್‍ಐ ಮಹೇಶ್‍ಗೌಡ ಹಾಗೂ ಸಿಬ್ಬಂದಿಗಳು ಬಂದು ತಾಪಂ ಇಒ ಮಡುಗಿನ ಬಸಪ್ಪ ಮೇಲೆ ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ತಾಪಂ ಕಚೇರಿ ಮುಂದೆ ಗ್ರಾಪಂ ಪಿಡಿಒಗಳು ಕಚೇರಿ un ತಾಪಂ ಇಒ ಮೇಲೆ ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ವಾಲ್ಮೀಕಿ ವೃತ್ತದಲ್ಲಿ ಗ್ರಾಪಂ ಸದಸ್ಯರ, ನಗರಸಭೆ ಸದಸ್ಯರು ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಸ್ತೆಗಿಗಿದು ಪ್ರತಿಭಟನೆ ನಡೆಸಿದ್ದಾರೆ.


ನಗರಸಭೆ ಸದಸ್ಯ ವೀರಭದ್ರಪ್ಪ ಮಾತನಾಡಿ ತಾಲೂಕಿನ ಇವಿಧ ಇಲಾಖೆಗಳಲ್ಲಿ ಹಾಗೂ ಪಿಡಿಒಗಳು ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸುವಂತಿಲ್ಲ. ಪದೆಪದೇ ವರ್ಗಾವಣೆ, ಅಧಿಕಾರಿಗಳ ಮೇಲೆ ಗೂಂಡ ವರ್ತನೆ ಮಾಡುವ  ಬಿಜೆಪಿ ಕಾರ್ಯಕರ್ತರ ವಿರುದ್ದ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು