7:56 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬಿಜೆಪಿ ನಾಯಕ ಭಾನುಪ್ರಕಾಶ್ ಹೃದಯಾಘಾತಕ್ಕೆ ಬಲಿ: ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ದುರ್ಘಟನೆ

17/06/2024, 18:21

ಶಿವಮೊಗ್ಗ(reporterkarnataka.com): ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರುದ್ಧ ಬಿಜೆಪಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಾ ಭಾಷಣ ಮಾಡಿದ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಅವರು ಕೆಲವೇ ನಿಮಿಷಗಳಲ್ಲಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.


ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು.
ರಾಜ್ಯ ಸರಕಾರವನ್ನು ಅಣಕಿಸಲು ಸಾವಿನ ಚಟ್ಟವನ್ನು ಪ್ರತಿಭನೆಯ ವೇಳೆ ಅಣಕು ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾನುಪ್ರಕಾಶ್ ಅವರು ಭಾಷಣ ಮಾಡಿದ್ದರು.
ಪ್ರತಿಭಟನೆ ಮುಗಿಸಿ ಹಿಂತಿರುಗಲು ಕಾರಿನಲ್ಲಿ ಕುಳಿತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಸಮೀಪದ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್ ಅವರು ಕೊನೆಯುಸಿರೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು