11:58 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ

19/05/2025, 20:41

* ಬಿಜೆಪಿ ನಾಯಕರಿಗೆ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಿಂದ ಆಹ್ವಾನ

* ಪ್ರಪಂಚದ ಯಾವುದೇ ದೇಶದಲ್ಲಿ ಇಲ್ಲದ ವಿಶಿಷ್ಟ ಗ್ಯಾರಂಟಿ ಯೋಜನೆ ಎಂದು ಬಣ್ಣನೆ

ಬೆಂಗಳೂರು(reporterkarnataka.com): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ಆಯೋಜನೆಯಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸಿ ಫಲಾನುಭವಿಗಳ ನೋಡಿ ಖುದ್ದು ಕೇಳಿ, ಕಿವಿ ತುಂಬಿಕೊಳ್ಳಿ ಎಂದು ಶಾಸಕರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ . ವಿಜಯೇಂದ್ರ ಅವರು ಸಮಾವೇಶಕ್ಕೆ ಬರಬೇಕು. ಫಲಾನುಭವಿಗಳು ಏನು ಹೇಳುತ್ತಾರೆ ಎಂಬುದನ್ನು ಖುದ್ದು, ನೋಡಿ, ಕೇಳಿ ಕಣ್ತುಂಬಿಕೊಳ್ಳಬೇಕು ಎಂದು ಆಹ್ವಾನಿಸಿದ್ದಾರೆ.
ಕರೋನಾ ಕಾಲದಲ್ಲಿ ರಾಜ್ಯದ ಆರ್ಥಿಕತೆ ಹದಗೆಟ್ಟಿತ್ತು. ಜನ ಸಂಕಷ್ಟ ಅನುಭವಿಸುತ್ತಿದ್ದರು. ಕಾಂಗ್ರೆಸ್ ಎರಡು ವರ್ಷಗಳ ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಜನ ಕಲ್ಯಾಣ ಯೋಜನೆಗಳ ಜತೆ ರಾಜ್ಯದ ಆರ್ಥಿಕತೆಯನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿತ್ತು. ಕಾಂಗ್ರೆಸ್‌ ಎಂದರೆ ಗ್ಯಾರಂಟಿ. ಕಾಂಗ್ರೆಸ್ ನಾಯಕರು ಎಂದರೆ ಗ್ಯಾರಂಟಿ. ಪಕ್ಷ ನೀಡಿದ ಆಶ್ವಾಸನೆಯನ್ನು ಎರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಈಡೇರಿಸಿಕೊಂಡು ಬಂದಿದೆ ಎಂದು ಮಂಜುನಾಥ್ ಭಂಡಾರಿ ಹೇಳಿದ್ದಾರೆ.

*ಪ್ರಪಂಚದಲ್ಲೆಲ್ಲೂ ಇಲ್ಲದ ಗ್ಯಾರಂಟಿ:*
ಎರಡು ವರ್ಷಗಳಿಂದ ಕಾಂಗ್ರೆಸ್ 90 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೇರವಾಗಿ ತಲುಪಿಸಲಾಗಿದೆ.
ರಾಜ್ಯದ ಬಡವರು, ಮಧ್ಯಮ ವರ್ಗದವರು, ಅಲ್ಪಸಂಖ್ಯಾತರು, ಹಿಂದುಳಿದವರು, ಮಹಿಳೆಯರು, ಯುವಕರು ಎಲ್ಲರಿಗೂ ಜಾತಿ, ಧರ್ಮ, ಪಕ್ಷ, ಬೇಧವಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ‌ ಮಾಡಲಾಗಿದೆ.
ಪ್ರಪಂಚದ ಯಾವ ರಾಷ್ಟ್ರದಲ್ಲೂ ಇಲ್ಲದಂಥ ವಿಶಿಷ್ಟವಾದ ಜನಕಲ್ಯಾಣ ಕಾರ್ಯಕ್ರಮ ಈ ಗ್ಯಾರಂಟಿ ಯೋಜನೆಯಾಗಿದೆ. ಆದರೆ, ವಿರೋಧ ಪಕ್ಷಗಳ ನಾಯಕರು ಮೊಸರಿನಲ್ಲಿ ಕಲ್ಲು ಹುಡುಕುವ ಕಾರ್ಯ ಮಾಡುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ.‌
ಆದರೆ, 4 ಲಕ್ಷ 09 ಸಾವಿರ ಕೋಟಿ ರೂ. ಆಯವ್ಯಯದಲ್ಲಿ 1 ಲಕ್ಷ 35. ಸಾವಿರ ಕೋಟಿ ರೂ. ಹಣವನ್ನು ನಮ್ಮ ಮುಖ್ಯಮಂತ್ರಿಗಳು ಅಭಿವೃದ್ಧಿಗಾಗಿ ತೆಗೆದಿರಿಸಿದ್ದಾರೆ. ಹಾಗಾಗಿ ಗ್ಯಾರಂಟಿಗಳ ಮೂಲಕ ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ತಲುಪುವ ಜತೆಗೆ, ಅಭಿವೃದ್ಧಿ ಯೋಜನೆಗಳೂ ಶರವೇಗದಲ್ಲಿ‌ ನಡೆಯುತ್ತಿವೆ ಎಂದು ಮಂಜುನಾಥ್ ಭಂಡಾರಿ ಹೇಳಿದ್ದಾರೆ.
ಹೀಗಾಗಿ ಈ ಸಮಾವೇಶಕ್ಕೆ ವಿರೋಧ ಪಕ್ಷದ ನಾಯಕರು ಬಂದು ಖುದ್ದು ಫಲಾನುಭವಿಗಳ ಮಾತುಗಳನ್ನು ಆಲಿಸಬೇಕಾಗಿ ಈ ಮೂಲಕ ಆಹ್ವಾನ ನೀಡುತ್ತೇನೆ ಎಂದು ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು