8:58 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ: ಶಾಸಕ ವೇದವ್ಯಾಸ ಕಾಮತ್ ಸಾರಥ್ಯ

03/08/2025, 10:59

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ.
ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು