2:14 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ: ಶಾಸಕ ವೇದವ್ಯಾಸ ಕಾಮತ್ ಸಾರಥ್ಯ

03/08/2025, 10:59

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ.
ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು