4:31 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಸಹಿತ 18 ಬಿಜೆಪಿ ಶಾಸಕರ 6 ತಿಂಗಳ ಕಾಲ ಅಮಾನತು

21/03/2025, 21:04

ಬೆಂಗಳೂರು(reporterkarnataka.com): ವಿಧಾನ ಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಮಂದಿ ಶಾಸಕರನ್ನು ಕಲಾಪದಿಂದ 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೇರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು. ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.
ಅಮಾನತುಗೊಂಡವರು: ಬಿಜೆಪಿ ಶಾಸಕರಾದ ದೊಡ್ಡಣ್ಣ ಗೌಡ ಪಾಟೀಲ್, ಎಸ್.ಆರ್ ವಿಶ್ವನಾಥ್, ಅಶ್ವತ್ಥ್ ನಾರಾಯಣ್, ಚೆನ್ನಬಸಪ್ಪ, ಉಮನಾಥ್ ಕೋಟ್ಯಾನ್, ಯಶಪಾಲ್ ಸುವರ್ಣ, ಹರೀಶ್ ಬಿ.ಪಿ., ಚಂದ್ರು ಲಮಾಣಿ, ಶರಣು ಸಲಗಾರ್, ಶೈಲೇಂದ್ರ ಬೆಳ್ದಾಳೆ, ಸಿ.ಕೆ.ರಾಮಮೂರ್ತಿ, ಮುನಿರತ್ನ, ಧೀರಜ್ ಮುನಿರಾಜ್, ಡಾ. ಭರತ್ ಶೆಟ್ಟಿ, ಬಸವರಾಜ್ ಮತ್ತಿಮೂಡ್, ಸುರೇಶ್ ಗೌಡ, ಬಿ.ಬಸವರಾಜ್, ಎಂ.ಆರ್.ಪಾಟೀಲ್ ಅವರನ್ನು 6 ತಿಂಗಳಿಗೆ ವಿಧಾನಸಭೆ ಕಲಾಪದಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು