1:13 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ- ಡಾ. ಭರತ್ ಶೆಟ್ಟಿ, ದಕ್ಷಿಣ- ವೇದವ್ಯಾಸ ಕಾಮತ್, ಬಂಟ್ವಾಳ- ರಾಜೇಶ್ ನಾಯ್ಕ್; ಅಂಗಾರ, ಮಠಂದೂರಿಗೆ ಟಿಕೆಟ್ ಇಲ್ಲ

11/04/2023, 22:11

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಥಮ ಯಾದಿ ಮಂಗಳವಾರ ಬಿಡುಗಡೆಯಾಗಿದ್ದು, ಮಂಗಳೂರು ಉತ್ತರ, ದಕ್ಷಿಣ, ಮೂಡುಬಿದರೆ ಸೇರಿದಂತೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ದೊರಕಿದೆ.
ಮಂಗಳೂರು ಉತ್ತರದಿಂದ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್, ಮೂಡುಬಿದರೆ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಹರೀಶ್ ಪೂಂಜ, ಬಂಟ್ವಾಳ ರಾಜೇಶ್ ನಾಯ್ಕ್ ಅವರಿಗೆ ಟಿಕೆಟ್ ದೊರೆತಿದೆ. ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಾದ ಅಂಗಾರ ಹಾಗೂ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸುಳ್ಯದಲ್ಲಿ ಭಾಗೀರಥಿ ಮುರುಳ್ಯ ಮತ್ತು ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಗೆ ಮಂಗಳೂರು ಕ್ಷೇತ್ರದಲ್ಲಿ ಸತೀಶ್ ಕುಂಪಲ ಅವರಿಗೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು