3:16 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ

24/08/2023, 21:57

ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಆಗಸ್ಟ್ 28ರಂದು ಸೌಜನ್ಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ನಡೆಯಲಿರುವ ಬೆಳ್ತಂಗಡಿ ಚಲೋ ಬೆಂಬಲಿಸಿ ನಗರದಲ್ಲಿ ಜರುಗಿದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸೌಜನ್ಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎಡಪಂಥೀಯರು ನಿರಂತರ ಹೋರಾಟದಲ್ಲಿದ್ದಾರೆ. ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬುತ್ತಿರುವಾಗ ಬಿಜೆಪಿ ಹೋರಾಟದ ನಾಟಕ ಮಾಡುತ್ತಿದೆ. ಜಿಲ್ಲೆಯ ವಿದ್ಯಾರ್ಥಿ ಯುವಜನರು 28ರ ಬೆಳ್ತಂಗಡಿ ಚಲೋ ಹೋರಾಟ ಬೆಂಬಲಿಸಬೇಕೆಂದು ಕರೆ ನೀಡಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಸಂಘಟನೆಯ ಸಂಚಾಲಕಿ ಮಂಜುಳಾ ನಾಯಕ್ ಮಾತನಾಡಿದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲರಾದ ನಿತಿನ್ ಕುತ್ತಾರ್, ನವೀನ್ ಕೊಂಚಾಡಿ, ರಫೀಕ್ ಹರೇಕಳ, ತಯ್ಯೂಬ್ ಬೆಂಗ್ರೆ, ಜಗದೀಶ್ ಬಜಾಲ್, ಭಾರತ ವಿದ್ಯಾರ್ಥಿ ಫೆಡರೇಶನ್ ನ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಪ್ರಥಮ್ ಬಜಾಲ್, ಮಾದುರಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು