3:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ

24/08/2023, 21:57

ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಆಗಸ್ಟ್ 28ರಂದು ಸೌಜನ್ಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ನಡೆಯಲಿರುವ ಬೆಳ್ತಂಗಡಿ ಚಲೋ ಬೆಂಬಲಿಸಿ ನಗರದಲ್ಲಿ ಜರುಗಿದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸೌಜನ್ಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎಡಪಂಥೀಯರು ನಿರಂತರ ಹೋರಾಟದಲ್ಲಿದ್ದಾರೆ. ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬುತ್ತಿರುವಾಗ ಬಿಜೆಪಿ ಹೋರಾಟದ ನಾಟಕ ಮಾಡುತ್ತಿದೆ. ಜಿಲ್ಲೆಯ ವಿದ್ಯಾರ್ಥಿ ಯುವಜನರು 28ರ ಬೆಳ್ತಂಗಡಿ ಚಲೋ ಹೋರಾಟ ಬೆಂಬಲಿಸಬೇಕೆಂದು ಕರೆ ನೀಡಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಸಂಘಟನೆಯ ಸಂಚಾಲಕಿ ಮಂಜುಳಾ ನಾಯಕ್ ಮಾತನಾಡಿದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲರಾದ ನಿತಿನ್ ಕುತ್ತಾರ್, ನವೀನ್ ಕೊಂಚಾಡಿ, ರಫೀಕ್ ಹರೇಕಳ, ತಯ್ಯೂಬ್ ಬೆಂಗ್ರೆ, ಜಗದೀಶ್ ಬಜಾಲ್, ಭಾರತ ವಿದ್ಯಾರ್ಥಿ ಫೆಡರೇಶನ್ ನ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಪ್ರಥಮ್ ಬಜಾಲ್, ಮಾದುರಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು