6:44 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು