8:29 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು