9:19 PM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು