11:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

BJP Protest | ಕಾಂಗ್ರೆಸ್ ಗೆ ಮತ ನೀಡಿದವರು ಪಾಪ ತೊಳೆದುಕೊಳ್ಳುವ ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

03/04/2025, 21:20

ಬೆಂಗಳೂರು(reporterkarnataka.com): ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ. ಸತ್ತಾಗ ಹೆಣದ ಮೇಲೆ ಹಣ ಹಾಕುವ ಪದ್ಧತಿ ಇದೆ. ಕಾಂಗ್ರೆಸ್ ಸರ್ಕಾರ ಮರಣ ಪ್ರಮಾಣ ಪತ್ರಕ್ಕೂ ಶುಲ್ಕ ಏರಿಸಿ ಹಣ ಸಂಗ್ರಹ ಮಾಡುತ್ತಿದೆ. ಮದ್ಯದ ದರವನ್ನೂ ಏರಿಸಿ ಮದ್ಯಪ್ರಿಯರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಶೌಚಾಲಯ ನಿರ್ವಹಣೆ ಮಾಡಲು ಕೂಡ ಸರ್ಕಾರದ ಬಳಿ ದುಡ್ಡಿಲ್ಲ. ಬೆಂಗಳೂರಿನ ಜನರಿಗೆ ಮುಂದೆ ನೀರಿನ ಶುಲ್ಕ ಏರಿಕೆಯ ಶಾಕ್ ಕೂಡ ಕಾದಿದೆ ಎಂದರು.
ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ, ಪತ್ನಿಗೆ ಸಹಾಯಧನ ನೀಡಿ, ಪತಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದರು.


ಆಯವ್ಯಯದಲ್ಲಿ ಜನರ ಮೇಲೆ ಹಾಕುವ ತೆರಿಗೆಗಳ ಬಗ್ಗೆ ಸರಿಯಾಗಿ ತಿಳಿಸಬೇಕಿತ್ತು. ಆದರೆ ಬಜೆಟ್ ಮುಗಿದ ನಂತರ ತೆರಿಗೆಗಳನ್ನು ಏರಿಸಲಾಗಿದೆ. ವಕ್ಪ್ ಮಂಡಳಿ ರೈತರ ಜಮೀನುಗಳನ್ನು ಕಬಳಿಸುತ್ತಿತ್ತು. ಅದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿಯವರು ಕಾಯ್ದೆ ತಿದ್ದುಪಡಿ ತಂದಿದ್ದಾರೆ. ಆದರೆ ಇದನ್ನು ಕೂಡ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದರು.
ಬಿಜೆಪಿ ನಾಯಕರು ಪ್ರತಿಭಟಿಸಿದಾಗ ಬಸ್ ಗಳನ್ನು ತಂದು ಅದರಲ್ಲಿ ಬಂಧಿಸಿ ಇರಿಸಲಾಗುತ್ತದೆ. ಆದರೆ ಈಗ ಬಸ್ ಗಳಿಗೆ ಕೊರತೆ ಇದೆ. ಬಸ್ ತರುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು