2:50 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

BJP Protest | ಕಾಂಗ್ರೆಸ್ ಗೆ ಮತ ನೀಡಿದವರು ಪಾಪ ತೊಳೆದುಕೊಳ್ಳುವ ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

03/04/2025, 21:20

ಬೆಂಗಳೂರು(reporterkarnataka.com): ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ. ಸತ್ತಾಗ ಹೆಣದ ಮೇಲೆ ಹಣ ಹಾಕುವ ಪದ್ಧತಿ ಇದೆ. ಕಾಂಗ್ರೆಸ್ ಸರ್ಕಾರ ಮರಣ ಪ್ರಮಾಣ ಪತ್ರಕ್ಕೂ ಶುಲ್ಕ ಏರಿಸಿ ಹಣ ಸಂಗ್ರಹ ಮಾಡುತ್ತಿದೆ. ಮದ್ಯದ ದರವನ್ನೂ ಏರಿಸಿ ಮದ್ಯಪ್ರಿಯರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಶೌಚಾಲಯ ನಿರ್ವಹಣೆ ಮಾಡಲು ಕೂಡ ಸರ್ಕಾರದ ಬಳಿ ದುಡ್ಡಿಲ್ಲ. ಬೆಂಗಳೂರಿನ ಜನರಿಗೆ ಮುಂದೆ ನೀರಿನ ಶುಲ್ಕ ಏರಿಕೆಯ ಶಾಕ್ ಕೂಡ ಕಾದಿದೆ ಎಂದರು.
ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ, ಪತ್ನಿಗೆ ಸಹಾಯಧನ ನೀಡಿ, ಪತಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದರು.


ಆಯವ್ಯಯದಲ್ಲಿ ಜನರ ಮೇಲೆ ಹಾಕುವ ತೆರಿಗೆಗಳ ಬಗ್ಗೆ ಸರಿಯಾಗಿ ತಿಳಿಸಬೇಕಿತ್ತು. ಆದರೆ ಬಜೆಟ್ ಮುಗಿದ ನಂತರ ತೆರಿಗೆಗಳನ್ನು ಏರಿಸಲಾಗಿದೆ. ವಕ್ಪ್ ಮಂಡಳಿ ರೈತರ ಜಮೀನುಗಳನ್ನು ಕಬಳಿಸುತ್ತಿತ್ತು. ಅದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿಯವರು ಕಾಯ್ದೆ ತಿದ್ದುಪಡಿ ತಂದಿದ್ದಾರೆ. ಆದರೆ ಇದನ್ನು ಕೂಡ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದರು.
ಬಿಜೆಪಿ ನಾಯಕರು ಪ್ರತಿಭಟಿಸಿದಾಗ ಬಸ್ ಗಳನ್ನು ತಂದು ಅದರಲ್ಲಿ ಬಂಧಿಸಿ ಇರಿಸಲಾಗುತ್ತದೆ. ಆದರೆ ಈಗ ಬಸ್ ಗಳಿಗೆ ಕೊರತೆ ಇದೆ. ಬಸ್ ತರುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು