8:50 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆ ಚೆಂಬು ಹಿಡಿದು ಬಿಜೆಪಿ ಪ್ರತಿಭಟನೆ

06/03/2026, 20:11

ಬೆಂಗಳೂರು(reporterkarnataka.com): ಮೂರು ಗಂಟೆ ಮೂವತ್ತು ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಆರೋಪಿ ವಿಪಕ್ಷ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರೆಗೆ ಮೆರವಣಿಗೆ ಮಾಡಿದ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ರೈತರು, ಯುವ ಜನತೆ ಹಾಗೂ ಪರಿಶಿಷ್ಠ ಜಾತಿ, ಪಂಗಡ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಇದೊಂದು ಶೂನ್ಯ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಯುವ ಜನತೆಗೆ ಮೋಸ ಮಾಡಿದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ… ರೈತರಿಗೆ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಪಂಗನಾಮ ಹಾಕಿದ ಕಾಂಗ್ರೆಸ್ ಬಜೆಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು