7:38 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ; ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ: ಆರ್. ಅಶೋಕ್

05/02/2025, 17:15

ಬೆಂಗಳೂರು(reporterkarnataka.com):; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. ಆದರೆ ಈ ರೀತಿ ಸಮಸ್ಯೆಯಾಗಿರುವುದು ನನಗೂ ನೋವು ತಂದಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗಿತ್ತು ಎಂದರು.
ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆಯಾಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದೆ. ಇಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದರು.
ಪಕ್ಷದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ದೂರುವುದು ಬಹಳ ಬೇಸರ ಸಂಗತಿ. ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ. ಕೆಲವೇ ದಿನಗಳಲ್ಲಿ ಇದು ಬಗೆಹರಿಯಲಿದೆ ಎಂದು ಅವರು ನುಡಿದರು.
ಆರ್‌ಎಸ್‌ಎಸ್‌ ರಾಜಕೀಯ ಪಕ್ಷವಲ್ಲ. ನಾನು ಅಲ್ಲಿಗೆ ಹೋಗಿ ಸಲಹೆ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು. ಅಂತಹ ವ್ಯವಸ್ಥೆ ಆರ್‌ಎಸ್‌ಎಸ್‌ನಲ್ಲಿ ಇಲ್ಲ. ನಾನು ಯಾರನ್ನೂ ಭೇಟಿ ಮಾಡಿಲ್ಲ. ರಾಜ್ಯಾಧ್ಯಕ್ಷರ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರು ಎಲ್ಲವನ್ನೂ ತೀರ್ಮಾನಿಸುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು