1:57 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು ಮತ್ತೇನು ಹೇಳಿದ್ರು?

30/11/2021, 15:28

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ .

ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆಂಬ ಕಟೀಲ್ ಹೇಳಿಕೆಗೆ ಕಿಡಿಕಾರಿದರು.

ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕನಾಗಿದ್ದೂ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಸಿದ್ದರಾಮ್ಯ ವಾಗ್ದಾಳಿ ನಡೆಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿರುವ ಬಿಎಸ್‍ವೈ ಹೇಳಿಕೆಗೆ ಟಾಂಗ್ ನೀಡಿದ್ದೂ, ಬಿಎಸ್‍ವೈ ಅವರ ಜೇಬಿನಲ್ಲಿ ಮತಗಳು ಇವೆಯೇ? ಈ ರಾಜ್ಯದ ಜನ ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆಂದು ತಿರುಗೇಟು ನೀಡಿದರು.

ಜೆಡಿಎಸ್ ಯಾವ ಪಕ್ಷದ ಬಿ ಟೀಮ್ ಅಲ್ಲ ಎಂದ ಹೆಚ್‍ಡಿಕೆ ಹೇಳಿಕೆಗೂ ಟಾಂಗ್ ನೀಡಿದ್ದೂ, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹಲವು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದರು. ಹಾಗೆಯೇ 6 ಕಡೆ ಮಾತ್ರ ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತದೆ ಎಂದು ವ್ಯಂಗ್ಯವಾಡಿದರು. 

ಈ ವೇಳೆ ಅವರೊಂದಿಗೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಆಂಜನೇಯ ಹಾಗೂ ಬಿ. ರಮಾನಾಥ ರೈ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು