1:02 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ

09/08/2024, 18:57

ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ನಂಜಪ್ಪ ಬಡಾವಣೆಯ ಮನೆಗೆ ಇಂದು ಮಹಾ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿತು ಮುತ್ತಿಗೆಗೆ ಮುನ್ನವೇ ರಸ್ತೆಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಫೋಟೋ ಪ್ರದರ್ಶಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ಪ್ರತಿಭಟನಾಕಾರರು ಮೊದಲ ಬ್ಯಾರಿಕೇಡ್​ ಅನ್ನು ನೂಕಿ ಮುಂದೆ ಸಾಗಿದರು. ಎರಡನೇ ಬ್ಯಾರಿಕೇಡ್​ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ ಬ್ಯಾರಿಕೇಡ್​ ಮೇಲೆ ಹತ್ತಿ ಒಳ ನುಗ್ಗಲು ಯತ್ನಿಸಿದರು‌. ಈ ವೇಳೆ ಪೊಲೀಸರು ಎಲ್ಲಾ ಪ್ರತಿಭಟನಗಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು.
ಒಕ್ಕೂಟದ ಸಂಚಾಲಕ ಕೆ.ರಂಗನಾಥ್ ಅವರು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ಇದರಿಂದ ನಾವು ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದೇವೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌.ಎಂ.ಶರತ್ ಪಾಲಕ್ಷ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು