1:30 AM Monday10 - February 2025
ಬ್ರೇಕಿಂಗ್ ನ್ಯೂಸ್
ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.… ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್… ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ… ಆಪ್‌ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ:… ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ… ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ

09/08/2024, 18:57

ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ನಂಜಪ್ಪ ಬಡಾವಣೆಯ ಮನೆಗೆ ಇಂದು ಮಹಾ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿತು ಮುತ್ತಿಗೆಗೆ ಮುನ್ನವೇ ರಸ್ತೆಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಫೋಟೋ ಪ್ರದರ್ಶಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ಪ್ರತಿಭಟನಾಕಾರರು ಮೊದಲ ಬ್ಯಾರಿಕೇಡ್​ ಅನ್ನು ನೂಕಿ ಮುಂದೆ ಸಾಗಿದರು. ಎರಡನೇ ಬ್ಯಾರಿಕೇಡ್​ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ ಬ್ಯಾರಿಕೇಡ್​ ಮೇಲೆ ಹತ್ತಿ ಒಳ ನುಗ್ಗಲು ಯತ್ನಿಸಿದರು‌. ಈ ವೇಳೆ ಪೊಲೀಸರು ಎಲ್ಲಾ ಪ್ರತಿಭಟನಗಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು.
ಒಕ್ಕೂಟದ ಸಂಚಾಲಕ ಕೆ.ರಂಗನಾಥ್ ಅವರು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ಇದರಿಂದ ನಾವು ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದೇವೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌.ಎಂ.ಶರತ್ ಪಾಲಕ್ಷ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು