1:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಬದಲಾವಣೆ ಸಾಧ್ಯತೆ ಕಡಿಮೆ: ಮಾಜಿ ಡಿಸಿಎಂ ಆರ್. ಅಶೋಕ್

24/06/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ತೀರಾ ಕಡಿಮೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಕಟೀಲ್ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ. ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ ಎಂದರು.
ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ಕುರಿತು ಮಾಧ್ಯಮ ಮಂದಿಯ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಯಾವ ಮಾಹಿತಿ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ. ಪಾರ್ಲಿಮೆಂಟ್ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಆರ್. ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು