7:02 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರು ಅವಧಿ ಮುಗಿದ ಔಷಧದಂತೆ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಟೀಕೆ

19/08/2023, 20:43

ಮಂಗಳೂರು(reporterkarnataka.com):ಬಿಜೆಪಿ ರಾಜ್ಯದಲ್ಲಿ ಚೇತರಿಕೆ ಆಗದಿರುವಷ್ಟು ಅಧ:ಪತನದ ಹಾದಿ ಹಿಡಿದಿದೆ. ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷರು ಅವಧಿ ಮುಗಿದ ಔಷಧ ರೀತಿಯಲ್ಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ವ್ಯಂಗ್ಯವಾಡಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಂತರಿಕ ಗುಂಪುಗಾರಿಕೆಯಿಂದ ಬಳಲುತ್ತಿದೆ. ಇವತ್ತಿನವರಿಗೆ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ನಾಯಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ತಮ್ಮ ಸೋಲಿಗೆ ಬಿಜೆಪಿಯವರೇ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರೂ ಆತ್ಮಾವಲೋಕನ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡು ಈಗ ಅವಧಿ ಮೀರಿದ ಔಷಧೀಯ ರೀತಿಯಲ್ಲಿ ನಳಿನ್ ಕುಮಾರ್ ಕಟೀಲ್ ಬಿಜೆಪಿಯಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶರಣಾಗಿದ್ದಾರೆ ಎಂದು ಐವನ್ ಹೇಳಿದರು.
ಬಿಜೆಪಿ ಸರಕಾರದ ಅವಧಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ವ್ಯಾಪಕ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ. ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.
ವೆನ್ಲಾಕ್ ಆಸ್ಪತ್ರೆ ಸಮಸ್ಯೆ ಗಳ ಬಗ್ಗೆ ಟೀಕೆ ಮಾಡುವ ಸ್ಥಳೀಯ ಶಾಸಕರು ತಮ್ಮ ಹೊಣೆಗಾರಿಕೆ ಮರೆತು ಮಾತನಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸಗಳ ಅರ್ಧ ಭಾಗವನ್ನು ಕೂಡ ನಮ್ಮ ಸಂಸದರು ಮಾಡಿಲ್ಲ. ಮಂಗಳೂರಿಗೆ ಮೆಟ್ರೋ ತರಬಹುದಿತ್ತು. ಅದು ಕೂಡ ಸಾಧ್ಯ ಆಗಿಲ್ಲ. ಪಂಪ್ ವೆಲ್ ಸೇತುವೆ ಕೂಡ ಅಸಮರ್ಪಕವಾಗಿದೆ ಎಂದರು ಟೀಕಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯ ಪ್ರವೀಣ್ ಚಂದ್ರ
ಆಳ್ವ, ಮಾಜಿ ಸದಸ್ಯರಾದ ಸೇಸಮ್ಮ, ಭಾಸ್ಕರ ರಾವ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಅಬ್ದುಲ್ ಸಲೀಂ ಮುಕ್ಕ, ಚೇತನ್ ಕುಮಾರ್, ಹಬೀಬ್ ಕಣ್ಣೂರ್, ಸತೀಶ್ ಪೆಂಗಲ್, ಯೋಗೀಶ್ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು