5:51 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

27/08/2024, 23:59

ಶಿವಮೊಗ್ಗ(reporterkarnataka.com): ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್ ‘ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “2000ದ ನಂತರ ಜನಿಸಿದ ಜನರೇಷನ್ – Z ಎಂದು ಕರೆಯಲ್ಪಡುವ 18-24 ವರ್ಷದ ಯುವಕ- ಯುವತಿಯರು ಭಾರತೀಯ ಜನತಾ ಪಕ್ಷ ಸೇರಲು ಹುಮ್ಮಸ್ಸಿನಿಂದ ಇದ್ದಾರೆ. ಇಂತಹ ಯುವ ಪೀಳಿಗೆಯ ಆಸಕ್ತರನ್ನು ಪಕ್ಷದ ಸದಸ್ಯರನ್ನಾಗಿ ಭರಮಾಡಿಕೊಳ್ಳುವತ್ತ ನಾವೆಲ್ಲಾ ಒಟ್ಟುಗೂಡಿ ಕೆಲಸ ಮಾಡಬೇಕು. ವಿದ್ಯಾರ್ಥಿ ಸಮುದಾಯ ಯುವ ಪೀಳಿಗೆ, ಮಾತ್ರವಲ್ಲದೇ ಸಮಾಜದ ಎಲ್ಲಾ ಸಮುದಾಯ-ವರ್ಗದ ಹಾಗೂ ವಿಶೇಷವಾಗಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಈ ಅಭಿಯಾನ ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗುವಂತೆ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಪಕ್ಷವು ಶಿಸ್ತಿಗೆ ಹೆಸರುವಾಸಿಯಾಗಿದ್ದು, ಶ್ರೇಷ್ಟ ಮೌಲ್ಯ, ಸಿದ್ದಾಂತದ ಮೇಲೆ ನಮ್ಮ ಪಕ್ಷ ನಿಂತಿದೆ. ದೇಶದೆಲ್ಲೆಡೆ ನಮ್ಮ ಪಕ್ಷವು ವ್ಯಾಪಿಸಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕದೆ, ಹೊಸ ಮುಖಗಳಿಗೆ, ಯುವ ಮನಸ್ಸುಗಳಿಗೆ ಅವಕಾಶ ನೀಡುತ್ತಿದೆ. ಹೀಗಿರುವಾಗ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಮೂಲಕದ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.
ಸೆಪ್ಟಂಬರ್ 1ರಿಂದ ನಡೆಯಲಿರುವ ಸದಸ್ಯತ್ವ ಅಭಿಯಾನದಲ್ಲಿ ಮಿಸ್ಡ್ ಕಾಲ್, ಕ್ಯೂಆರ್ ಕೋಡ್, ನಮೋ ಆಪ್, ಮತ್ತು ಬಿಜೆಪಿ ವೆಬ್ ಸೈಟ್ ಮೂಲಕ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ವಿಶೇಷ ಅಭಿಯಾನದ ಮೂಲಕ ರಾಷ್ಟ್ರದಾದ್ಯಂತ ಗರಿಷ್ಠ ಸಂಖ್ಯೆಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯತ್ತ ನಾವೆಲ್ಲ ಕಾರ್ಯೋನ್ಮುಖರಾಗಬೇಕು ಎಂದು ಕ್ಯಾ. ಚೌಟ ಕಾರ್ಯಕರ್ತರಿಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು