5:00 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

27/08/2024, 23:59

ಶಿವಮೊಗ್ಗ(reporterkarnataka.com): ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್ ‘ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “2000ದ ನಂತರ ಜನಿಸಿದ ಜನರೇಷನ್ – Z ಎಂದು ಕರೆಯಲ್ಪಡುವ 18-24 ವರ್ಷದ ಯುವಕ- ಯುವತಿಯರು ಭಾರತೀಯ ಜನತಾ ಪಕ್ಷ ಸೇರಲು ಹುಮ್ಮಸ್ಸಿನಿಂದ ಇದ್ದಾರೆ. ಇಂತಹ ಯುವ ಪೀಳಿಗೆಯ ಆಸಕ್ತರನ್ನು ಪಕ್ಷದ ಸದಸ್ಯರನ್ನಾಗಿ ಭರಮಾಡಿಕೊಳ್ಳುವತ್ತ ನಾವೆಲ್ಲಾ ಒಟ್ಟುಗೂಡಿ ಕೆಲಸ ಮಾಡಬೇಕು. ವಿದ್ಯಾರ್ಥಿ ಸಮುದಾಯ ಯುವ ಪೀಳಿಗೆ, ಮಾತ್ರವಲ್ಲದೇ ಸಮಾಜದ ಎಲ್ಲಾ ಸಮುದಾಯ-ವರ್ಗದ ಹಾಗೂ ವಿಶೇಷವಾಗಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಈ ಅಭಿಯಾನ ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗುವಂತೆ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಪಕ್ಷವು ಶಿಸ್ತಿಗೆ ಹೆಸರುವಾಸಿಯಾಗಿದ್ದು, ಶ್ರೇಷ್ಟ ಮೌಲ್ಯ, ಸಿದ್ದಾಂತದ ಮೇಲೆ ನಮ್ಮ ಪಕ್ಷ ನಿಂತಿದೆ. ದೇಶದೆಲ್ಲೆಡೆ ನಮ್ಮ ಪಕ್ಷವು ವ್ಯಾಪಿಸಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕದೆ, ಹೊಸ ಮುಖಗಳಿಗೆ, ಯುವ ಮನಸ್ಸುಗಳಿಗೆ ಅವಕಾಶ ನೀಡುತ್ತಿದೆ. ಹೀಗಿರುವಾಗ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಮೂಲಕದ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.
ಸೆಪ್ಟಂಬರ್ 1ರಿಂದ ನಡೆಯಲಿರುವ ಸದಸ್ಯತ್ವ ಅಭಿಯಾನದಲ್ಲಿ ಮಿಸ್ಡ್ ಕಾಲ್, ಕ್ಯೂಆರ್ ಕೋಡ್, ನಮೋ ಆಪ್, ಮತ್ತು ಬಿಜೆಪಿ ವೆಬ್ ಸೈಟ್ ಮೂಲಕ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ವಿಶೇಷ ಅಭಿಯಾನದ ಮೂಲಕ ರಾಷ್ಟ್ರದಾದ್ಯಂತ ಗರಿಷ್ಠ ಸಂಖ್ಯೆಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯತ್ತ ನಾವೆಲ್ಲ ಕಾರ್ಯೋನ್ಮುಖರಾಗಬೇಕು ಎಂದು ಕ್ಯಾ. ಚೌಟ ಕಾರ್ಯಕರ್ತರಿಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು