6:28 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ

25/12/2022, 14:17

ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಹಲವು ತಿಂಗಳಿನಿಂದ ಬಿಜೆಪಿ ಒಡನಾಟದಿಂದ ಬಹಳ ದೂರವೇ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ತ್ಯಜಿಸುತ್ತಾರೆ ಎಂದು ಈ ಹಿಂದೆಯೇ ರಾಜಕೀಯ ವೀಕ್ಷಕರು ಲೆಕ್ಕಾಚಾರ ಹಾಕಿದ್ದರು. ಹಾಗಾಗಿ ಇದು ಬಿಜೆಪಿ ಪಾಲಿಗೆ ಅಚ್ಚರಿಯ ವಿಷಯವಾಗಿ ಉಳಿದಿರಲಿಲ್ಲ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ
ಅವರು, ಬಿಜೆಪಿಗಾಗಿ ಸಾಕಷ್ಟು ದುಡಿಮೇ ಮಾಡಿದ್ದೇನೆ. ಕಷ್ಟದ ದಿನಗಳಲ್ಲಿ ನನ್ನ ಬೆಂಬಲಕ್ಕೆ ಯಾರೂ ಕೂಡ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್– ಬಿಜೆಪಿ ಸಮಿಶ್ರ ಸರ್ಕಾರ ತರುವುದರಲ್ಲಿ ನನ್ನದೇ ಹೆಚ್ಚು ಪಾತ್ರ ಇತ್ತು. ಆದರೆ ಜೈಲಿಗೆ ಹೋದಾಗ ಯಾರೂ ಕೂಡ ನನ್ನ ಬೆಂಬಲಕ್ಕೆ ಬಾರದೇ ಇರುವುದು ತೀವ್ರ ನೋವು ತಂದಿದೆ ಎಂದರು.

ಶ್ರೀರಾಮುಲು ನನ್ನ ಸಹೋದರ ಸಮಾನರು. ಈಗ ಬಿಜೆಪಿಯಲ್ಲಿ ಇದ್ದಾರೆ. ನಮ್ಮ ಹೊಸ ಪಕ್ಷಕ್ಕೆ ಬರುವಂತೆ ಅವರ ಮೇಲೆ ಎಂದಿಗೂ ಒತ್ತಡ ಹಾಕಲ್ಲ. ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ. ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದಾರೆ. ಅವರು ಯಾಕೇ ಹೀಗೆ ಹೇಳಿದರೂ ಎಂದು ನನಗೆ ಗೊತ್ತಿಲ್ಲ. ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ಘಾಸಿಯಾಯಿತು. ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಅನ್ಯಾಯವಾಗಿದೆ. ಕಷ್ಟದ ಜತೆಗೆ ನನ್ನ ಜತೆಗೆ ಇದ್ದ ಪತ್ನಿ ಲಕ್ಷ್ಮಿ ಅರುಣಾ ಹೊಸ ಪಕ್ಷ ಮುನ್ನಡೆಸುವಲ್ಲಿ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು