3:16 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ

25/12/2022, 14:17

ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಹಲವು ತಿಂಗಳಿನಿಂದ ಬಿಜೆಪಿ ಒಡನಾಟದಿಂದ ಬಹಳ ದೂರವೇ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ತ್ಯಜಿಸುತ್ತಾರೆ ಎಂದು ಈ ಹಿಂದೆಯೇ ರಾಜಕೀಯ ವೀಕ್ಷಕರು ಲೆಕ್ಕಾಚಾರ ಹಾಕಿದ್ದರು. ಹಾಗಾಗಿ ಇದು ಬಿಜೆಪಿ ಪಾಲಿಗೆ ಅಚ್ಚರಿಯ ವಿಷಯವಾಗಿ ಉಳಿದಿರಲಿಲ್ಲ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ
ಅವರು, ಬಿಜೆಪಿಗಾಗಿ ಸಾಕಷ್ಟು ದುಡಿಮೇ ಮಾಡಿದ್ದೇನೆ. ಕಷ್ಟದ ದಿನಗಳಲ್ಲಿ ನನ್ನ ಬೆಂಬಲಕ್ಕೆ ಯಾರೂ ಕೂಡ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್– ಬಿಜೆಪಿ ಸಮಿಶ್ರ ಸರ್ಕಾರ ತರುವುದರಲ್ಲಿ ನನ್ನದೇ ಹೆಚ್ಚು ಪಾತ್ರ ಇತ್ತು. ಆದರೆ ಜೈಲಿಗೆ ಹೋದಾಗ ಯಾರೂ ಕೂಡ ನನ್ನ ಬೆಂಬಲಕ್ಕೆ ಬಾರದೇ ಇರುವುದು ತೀವ್ರ ನೋವು ತಂದಿದೆ ಎಂದರು.

ಶ್ರೀರಾಮುಲು ನನ್ನ ಸಹೋದರ ಸಮಾನರು. ಈಗ ಬಿಜೆಪಿಯಲ್ಲಿ ಇದ್ದಾರೆ. ನಮ್ಮ ಹೊಸ ಪಕ್ಷಕ್ಕೆ ಬರುವಂತೆ ಅವರ ಮೇಲೆ ಎಂದಿಗೂ ಒತ್ತಡ ಹಾಕಲ್ಲ. ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ. ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದಾರೆ. ಅವರು ಯಾಕೇ ಹೀಗೆ ಹೇಳಿದರೂ ಎಂದು ನನಗೆ ಗೊತ್ತಿಲ್ಲ. ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ಘಾಸಿಯಾಯಿತು. ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಅನ್ಯಾಯವಾಗಿದೆ. ಕಷ್ಟದ ಜತೆಗೆ ನನ್ನ ಜತೆಗೆ ಇದ್ದ ಪತ್ನಿ ಲಕ್ಷ್ಮಿ ಅರುಣಾ ಹೊಸ ಪಕ್ಷ ಮುನ್ನಡೆಸುವಲ್ಲಿ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು