4:47 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ

25/12/2022, 14:17

ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಹಲವು ತಿಂಗಳಿನಿಂದ ಬಿಜೆಪಿ ಒಡನಾಟದಿಂದ ಬಹಳ ದೂರವೇ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ತ್ಯಜಿಸುತ್ತಾರೆ ಎಂದು ಈ ಹಿಂದೆಯೇ ರಾಜಕೀಯ ವೀಕ್ಷಕರು ಲೆಕ್ಕಾಚಾರ ಹಾಕಿದ್ದರು. ಹಾಗಾಗಿ ಇದು ಬಿಜೆಪಿ ಪಾಲಿಗೆ ಅಚ್ಚರಿಯ ವಿಷಯವಾಗಿ ಉಳಿದಿರಲಿಲ್ಲ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ
ಅವರು, ಬಿಜೆಪಿಗಾಗಿ ಸಾಕಷ್ಟು ದುಡಿಮೇ ಮಾಡಿದ್ದೇನೆ. ಕಷ್ಟದ ದಿನಗಳಲ್ಲಿ ನನ್ನ ಬೆಂಬಲಕ್ಕೆ ಯಾರೂ ಕೂಡ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್– ಬಿಜೆಪಿ ಸಮಿಶ್ರ ಸರ್ಕಾರ ತರುವುದರಲ್ಲಿ ನನ್ನದೇ ಹೆಚ್ಚು ಪಾತ್ರ ಇತ್ತು. ಆದರೆ ಜೈಲಿಗೆ ಹೋದಾಗ ಯಾರೂ ಕೂಡ ನನ್ನ ಬೆಂಬಲಕ್ಕೆ ಬಾರದೇ ಇರುವುದು ತೀವ್ರ ನೋವು ತಂದಿದೆ ಎಂದರು.

ಶ್ರೀರಾಮುಲು ನನ್ನ ಸಹೋದರ ಸಮಾನರು. ಈಗ ಬಿಜೆಪಿಯಲ್ಲಿ ಇದ್ದಾರೆ. ನಮ್ಮ ಹೊಸ ಪಕ್ಷಕ್ಕೆ ಬರುವಂತೆ ಅವರ ಮೇಲೆ ಎಂದಿಗೂ ಒತ್ತಡ ಹಾಕಲ್ಲ. ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ. ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದಾರೆ. ಅವರು ಯಾಕೇ ಹೀಗೆ ಹೇಳಿದರೂ ಎಂದು ನನಗೆ ಗೊತ್ತಿಲ್ಲ. ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ಘಾಸಿಯಾಯಿತು. ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಅನ್ಯಾಯವಾಗಿದೆ. ಕಷ್ಟದ ಜತೆಗೆ ನನ್ನ ಜತೆಗೆ ಇದ್ದ ಪತ್ನಿ ಲಕ್ಷ್ಮಿ ಅರುಣಾ ಹೊಸ ಪಕ್ಷ ಮುನ್ನಡೆಸುವಲ್ಲಿ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು