10:47 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್

05/12/2022, 22:15

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ, ಅವರಿಗೆ ಬದುಕನ್ನು ಕಟ್ಟಿಕೊಡಲು ಯಾವುದೇ ಕ್ರಮ ಕೈಗೊಂಡಿಲ್ಲ.

ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ ಸಂಪೂರ್ಣ
ಸ್ಥಗಿತಗೊಳಿಸಿದ್ದಾರೆ. ಸಬ್ಸಿಡಿ ದರದ ಸೀಮೆಎಣ್ಣೆಯನ್ನು ನೀಡಲೂ ಬಿಜೆಪಿ ಸರಕಾರ ಹಿಂದೇಟು ಹಾಕಿದೆ ಎಂದು ಖಾದರ್ ಹೇಳಿದ್ದಾರೆ.

ನಮ್ಮ ಸರಕಾರ ಇದ್ದಾಗ ಮೀನುಗಾರರ ನೋವಿಗೆ ಸ್ಪಂದಿಸುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಮೀನುಗಾರರಿಗೆ ಒಂದೇ ಒಂದು ಮನೆಯನ್ನೂ
ನೀಡಲು ಮುಂದಾಗಿಲ್ಲ. ಕೆಲವು ದಿನಗಳ ಹಿಂದೆ ಪಟ್ಟಿ ಕಳುಹಿಸಿದ್ದಾರೆ. ಆದರೆ ಅಲ್ಲಿನ ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಯಾವ ರೀತಿಯಲ್ಲಿ ಮೀನುಗಾರರನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನವುದಕ್ಕೆ ಸಾಕ್ಷಿ ಇದು.
ಕರಾವಳಿಯ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಯಾರೂ ಕೂಡ ಮೀನುಗಾರರ ಪರವಾಗಿ ಕೆಲಸ ಮಾಡಿಲ್ಲ.
ಮುಖ್ಯಮಂತ್ರಿ ಮಂಗಳೂರಿಗೆ ಬಂದ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆಯನ್ನು ಮುಂದಿಡುವ ಕೆಲಸ ಮಾಡಿಲ್ಲ. ಹೊಸ ಯೋಜನೆ ಬಿಡಿ, ಕಾಂಗ್ರೆಸ್‌ನ ಯೋಜನೆಗಳನ್ನೂ ಕೂಡಾ ಮೀನುಗಾರರಿಗೆ ತಲುಪಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೀನುಗಾರರ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ 10 ದಿನಗಳ ಒಳಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಖಾದರ್ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು