1:39 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್

05/12/2022, 22:15

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ, ಅವರಿಗೆ ಬದುಕನ್ನು ಕಟ್ಟಿಕೊಡಲು ಯಾವುದೇ ಕ್ರಮ ಕೈಗೊಂಡಿಲ್ಲ.

ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ ಸಂಪೂರ್ಣ
ಸ್ಥಗಿತಗೊಳಿಸಿದ್ದಾರೆ. ಸಬ್ಸಿಡಿ ದರದ ಸೀಮೆಎಣ್ಣೆಯನ್ನು ನೀಡಲೂ ಬಿಜೆಪಿ ಸರಕಾರ ಹಿಂದೇಟು ಹಾಕಿದೆ ಎಂದು ಖಾದರ್ ಹೇಳಿದ್ದಾರೆ.

ನಮ್ಮ ಸರಕಾರ ಇದ್ದಾಗ ಮೀನುಗಾರರ ನೋವಿಗೆ ಸ್ಪಂದಿಸುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಮೀನುಗಾರರಿಗೆ ಒಂದೇ ಒಂದು ಮನೆಯನ್ನೂ
ನೀಡಲು ಮುಂದಾಗಿಲ್ಲ. ಕೆಲವು ದಿನಗಳ ಹಿಂದೆ ಪಟ್ಟಿ ಕಳುಹಿಸಿದ್ದಾರೆ. ಆದರೆ ಅಲ್ಲಿನ ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಯಾವ ರೀತಿಯಲ್ಲಿ ಮೀನುಗಾರರನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನವುದಕ್ಕೆ ಸಾಕ್ಷಿ ಇದು.
ಕರಾವಳಿಯ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಯಾರೂ ಕೂಡ ಮೀನುಗಾರರ ಪರವಾಗಿ ಕೆಲಸ ಮಾಡಿಲ್ಲ.
ಮುಖ್ಯಮಂತ್ರಿ ಮಂಗಳೂರಿಗೆ ಬಂದ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆಯನ್ನು ಮುಂದಿಡುವ ಕೆಲಸ ಮಾಡಿಲ್ಲ. ಹೊಸ ಯೋಜನೆ ಬಿಡಿ, ಕಾಂಗ್ರೆಸ್‌ನ ಯೋಜನೆಗಳನ್ನೂ ಕೂಡಾ ಮೀನುಗಾರರಿಗೆ ತಲುಪಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೀನುಗಾರರ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ 10 ದಿನಗಳ ಒಳಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಖಾದರ್ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು